ADVERTISEMENT

ಮುಖ್ಯಮಂತ್ರಿ ಬಳಿ ಚರ್ಚೆ; ಸಮಯ ನಿಗದಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜುಲೈ 2013, 9:29 IST
Last Updated 22 ಜುಲೈ 2013, 9:29 IST

ದಾವಣಗೆರೆ: ದಾವಣಗೆರೆಯನ್ನು ಎರಡನೇ ರಾಜಧಾನಿ ಮಾಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಚರ್ಚೆ ನಡೆಸಲು ಸಮಯ ನಿಗದಿ ಮಾಡಿಕೊಡುವಂತೆ ಆಗ್ರಹಿಸಿ, ದಾವಣಗೆರೆ ಎರಡನೇ ರಾಜಧಾನಿ ಹೋರಾಟ ಸಮಿತಿ ಸದಸ್ಯರು ಭಾನುವಾರ ತೋಟಗಾರಿಕೆ ಹಾಗೂ ಎಂಪಿಎಂಸಿ ಸಚಿವ ಶಾಮನೂರು ಶಿವಶಂಕರಪ್ಪಗೆ ಮನವಿ ಸಲ್ಲಿಸಿದರು.

2ನೇ ರಾಜಧಾನಿ ಸಂಬಂಧ ಈಗಾಗಲೇ ಹಲವು ಬಾರಿ ಮಾಜಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಎರಡು ಬಾರಿ ಐಎಎಸ್  ಅಧಿಕಾರಿ  ಹೀರಾನಾಯ್ಕ  ಮೂಲಕ ಮನವಿ  ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ  ಅವರೊಂದಿಗೆ  ಸವಿಸ್ತಾರವಾಗಿ ಚರ್ಚೆ ನಡೆಸಬೇಕು. ದಿನಾಂಕ ಹಾಗೂ ಸಮಯ ನಿಗದಿಗೊಳಿಸಿದರೆ ಹೋರಾಟ ಸಮಿತಿಯ ನಿಯೋಗ ಅವರನ್ನು ಭೇಟಿ ಮಾಡಿ ಚರ್ಚಿಸುತ್ತದೆ ಎಂದು ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್.ಕೆ.ಶಾಸ್ತ್ರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.