ADVERTISEMENT

ವೈಜ್ಞಾನಿಕ ಬೆಲೆ ನೀಡಲು ರೈತರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2012, 4:20 IST
Last Updated 18 ಅಕ್ಟೋಬರ್ 2012, 4:20 IST

ಮಲೇಬೆನ್ನೂರು: ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನೀಡದಿದ್ದರೆ ಕೃಷಿ ವಲಯದ ಪ್ರಗತಿ ಸಾಧ್ಯವಿಲ್ಲ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ತೇಜಸ್ವಿ. ವಿ. ಪಟೇಲ್ ಅಭಿಪ್ರಾಯಪಟ್ಟರು.

ಸಮೀಪದ ಕುಣಿಬೆಳೆಕೆರೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನಾ ಸಭೆ ಉದ್ದೇಶಿಸಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ. ಪ್ರಭುಗೌಡ, ಪೂಜಾರ್ ಕೆಂಗಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ವಾಸನ ಓಂಕಾರಪ್ಪ, ಬಲ್ಲೂರು ರವಿಕುಮಾರ್, ವಿವಿಧ ಘಟಕದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.