ನ್ಯಾಮತಿ: ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ 5 ಎಕರೆ ಅಡಿಕೆ ತೋಟಕ್ಕೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಫಸಲು ಸಂಪೂರ್ಣ ಸುಟ್ಟುಹೋಗಿದೆ.
ಗ್ರಾಮದ ಬಾಬು ಅವರ ಸರ್ವೆ ನಂ. 49:1ರ ತೋಟದಲ್ಲಿ ಬೆಳೆದಿದ್ದ ಅಡಿಕೆ ಫಸಲಿಗೆ ಮೆಕ್ಕೆಜೋಳದ ಗರಿಯಿಂದ ಬೆಂಕಿ ತಗುಲಿದೆ. ಹೊನ್ನಾಳಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.ಬೆಂಕಿ ಆಕಸ್ಮಿಕದಿಂದ ಸುಮಾರು ₹ 25 ಲಕ್ಷ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದ ಸವಳಂಗ ಗ್ರಾಮ ಲೆಕ್ಕಾಧಿಕಾರಿ ಬಸವರಾಜಪ್ಪ ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.