ADVERTISEMENT

ಸೋಗಿಲು: ಅಡಿಕೆ ತೋಟಕ್ಕೆ ಬೆಂಕಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 8:29 IST
Last Updated 7 ಏಪ್ರಿಲ್ 2018, 8:29 IST
ನ್ಯಾಮತಿ ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಡಿಕೆ ಫಸಲು ಸಂಪೂರ್ಣ ಸುಟ್ಟು ಕರಕಲಾಗಿರುವುದು
ನ್ಯಾಮತಿ ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಡಿಕೆ ಫಸಲು ಸಂಪೂರ್ಣ ಸುಟ್ಟು ಕರಕಲಾಗಿರುವುದು   

ನ್ಯಾಮತಿ: ಸಮೀಪದ ಸೋಗಿಲು ಗ್ರಾಮದ ರೈತರೊಬ್ಬರ 5 ಎಕರೆ ಅಡಿಕೆ ತೋಟಕ್ಕೆ ಶುಕ್ರವಾರ ಆಕಸ್ಮಿಕವಾಗಿ ಬೆಂಕಿ ತಗುಲಿ ಫಸಲು ಸಂಪೂರ್ಣ ಸುಟ್ಟುಹೋಗಿದೆ.

ಗ್ರಾಮದ ಬಾಬು ಅವರ ಸರ್ವೆ ನಂ. 49:1ರ ತೋಟದಲ್ಲಿ ಬೆಳೆದಿದ್ದ ಅಡಿಕೆ ಫಸಲಿಗೆ ಮೆಕ್ಕೆಜೋಳದ ಗರಿಯಿಂದ ಬೆಂಕಿ ತಗುಲಿದೆ. ಹೊನ್ನಾಳಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು.‌ಬೆಂಕಿ ಆಕಸ್ಮಿಕದಿಂದ ಸುಮಾರು ₹ 25 ಲಕ್ಷ ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ ಎಂದು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದ ಸವಳಂಗ ಗ್ರಾಮ ಲೆಕ್ಕಾಧಿಕಾರಿ ಬಸವರಾಜಪ್ಪ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT