ದಾವಣಗೆರೆ: ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಶನಿವಾರ ನಡೆದ ಬೃಹತ್ ಲೋಕ ಅದಾಲತ್ನಲ್ಲಿ ಒಟ್ಟು 11,328 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.₹ 8.56 ಕೋಟಿ ಪರಿಹಾರ ಕೊಡಿಸಲಾಯಿತು.
ಜಿಲ್ಲಾ ನ್ಯಾಯಾಲಯವೂ ಸೇರಿ ಜಿಲ್ಲೆಯಲ್ಲಿರುವ ಎಲ್ಲ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 17,830 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 11,328 ಪ್ರಕರಣಗಳು ಇತ್ಯರ್ಥಗೊಂಡವು.
ರಾಜಿಯಾಗಬಲ್ಲ 250 ಅಪರಾಧ ಪ್ರಕರಣಗಳಲ್ಲಿ 20 ಪ್ರಕರಣಗಳು ಇತ್ಯರ್ಥಗೊಂಡವು. 93 ಚೆಕ್ ಅಮಾನ್ಯ ಪ್ರಕರಣಗಳಲ್ಲಿ ₹ 2.49 ಕೋಟಿ ಪರಿಹಾರ ಒದಗಿಸಲಾಯಿತು.ಬ್ಯಾಂಕ್ಗೆ ಸಂಬಂಧಿಸಿದ 8 ಪ್ರಕರಣಗಳನ್ನು ಇತ್ಯರ್ಥ ಪಡಿಸಿ ₹ 18.66 ಲಕ್ಷ ಪರಿಹಾರ ಕಲ್ಪಿಸಲಾಯಿತು. ಹಣ ವಸೂಲಾತಿಯ 5 ಪ್ರಕರಣಗಳಲ್ಲಿ ₹ 35.14 ಲಕ್ಷ ಪರಿಹಾರ ನೀಡಲು ತಿಳಿಸಲಾಯಿತು.
ಮೋಟರು ವಾಹನ ಕಾಯ್ದೆಯಡಿ 56 ಪ್ರಕರಣಗಳನ್ನು ಬಗೆಹರಿಸಿ, ₹ 1.75 ಕೋಟಿ ಪರಿಹಾರವನ್ನು ಕೊಡಿಸಲಾಯಿತು. ಕಾರ್ಮಿಕರ ಸಮಸ್ಯೆ, ಮರಳು ಅಕ್ರಮ ಸಾಗಾಟ, ಪಾಲುದಾರಿಕೆ ಸಮಸ್ಯೆ, ಸಿವಿಲ್ ವ್ಯಾಜ್ಯಗಳು, ಸಾರ್ವಜನಿಕ ಸೊತ್ತುಗಳಿಗೆ ಹಾನಿ ಹೀಗೆ ನಾನಾ ತರಹದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ನೇತೃತ್ವದಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಸಹಿತ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.