ADVERTISEMENT

‘ಯಡಿಯೂರಪ್ಪ ಸಂಪರ್ಕದಲ್ಲಿ 20 ಶಾಸಕರು’

​ಪ್ರಜಾವಾಣಿ ವಾರ್ತೆ
Published 23 ಮೇ 2019, 20:24 IST
Last Updated 23 ಮೇ 2019, 20:24 IST
   

ದಾವಣಗೆರೆ: ರಾಜ್ಯದ ಸಮ್ಮಿಶ್ರ ಸರ್ಕಾರ ಶೀಘ್ರವೇ ಪತನವಾಗಲಿದ್ದು, ಕಾಂಗ್ರೆಸ್‌ನ 20 ಮಂದಿ ಶಾಸಕರು ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಇದ್ದಾರೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್‌ನ ಕಿರುಕುಳ ತಾಳಲಾರದೆ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ವಾಮಮಾರ್ಗದಿಂದ ಅಧಿಕಾರ ಹಿಡಿದ ಎಚ್.ಡಿ.ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರು ಬೆಂಬಲ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.

ಮೋದಿ ಪ್ರಧಾನಿಯಾದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ ಸಚಿವ ಎಚ್‌.ಡಿ.ರೇವಣ್ಣ ಹೇಳಿದಂತೆ ನಡೆದುಕೊಳ್ಳಲಿ, ಯಡಿಯೂರಪ್ಪ ಅವರ ಮನೆ ಬಾಗಿಲು ಕಾಯುತ್ತೇನೆ ಎಂದು ಹೇಳಿರುವ ಶಾಸಕ ಜಮೀರ್ ಅಹ್ಮದ್‌ ವಾಚ್‌ಮನ್ ಬಟ್ಟೆ ತೊಟ್ಟು ಮನೆ ಕಾಯಲಿ, ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ನರೇಂದ್ರ ಮೋದಿ ಅವರು ನೇಣುಹಾಕಿಕೊಳ್ಳಲಿ ಎಂದು ಹೇಳಬಾರದಿತ್ತು. ಆದರೆ ಜನರೇ ಕಾಂಗ್ರೆಸ್‌ನವರಿಗೆ ನೇಣು ಹಾಕಿದ್ದಾರೆ’ ಎಂದು ಲೇವಡಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.