ADVERTISEMENT

ಲೋಕ ಅದಾಲತ್‌ನಲ್ಲಿ 2,909 ಪ್ರಕರಣ ಇತ್ಯರ್ಥ

₹ 7.67 ಕೋಟಿ ಪರಿಹಾರ ಕೊಡಿಸಿದ ನ್ಯಾಯಾಲಯ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2021, 3:57 IST
Last Updated 1 ಅಕ್ಟೋಬರ್ 2021, 3:57 IST
ರಾಜೇಶ್ವರಿ ಎನ್. ಹೆಗಡೆ
ರಾಜೇಶ್ವರಿ ಎನ್. ಹೆಗಡೆ   

ದಾವಣಗೆರೆ: ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಗುರುವಾರ ನಡೆದ ಬೃಹತ್‌ ಲೋಕ ಅದಾಲತ್‌ನಲ್ಲಿ ಒಟ್ಟು 2,909 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.

ಜಿಲ್ಲೆಯ 18 ಕಡೆಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 7,192 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 2,909 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಒಟ್ಟು ₹ 7.67 ಕೋಟಿ ಪರಿಹಾರವನ್ನು ಕೊಡಿಸಲಾಯಿತು.

ರಾಜಿಯಾಗಬಲ್ಲ 247 ಅಪರಾಧ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 60 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು. ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್‌ ಆ್ಯಕ್ಟ್‌ನಡಿ 532 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 76 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹ 2.49 ಕೋಟಿ ಪರಿಹಾರ ಕೊಡಿಸಲಾಗಿದೆ.

ADVERTISEMENT

ಬ್ಯಾಂಕ್‌ಗೆ ಸಂಬಂಧಿಸಿದ 61 ಪ್ರಕರಣಗಳ ಪೈಕಿ 8 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹ 24.61 ಲಕ್ಷ ಪರಿಹಾರ ಕಲ್ಪಿಸಲಾಯಿತು.

ಮೋಟರು ವಾಹನ ಕಾಯ್ದೆಯಡಿ ಬಂದಿದ್ದ ಒಟ್ಟು 275 ಪ್ರಕರಣಗಳ ಪೈಕಿ 62 ಪ್ರಕರಣಗಳನ್ನು ಬಗೆಹರಿಸಿ, ₹ 2.37 ಕೋಟಿ ಪರಿಹಾರವನ್ನು ಕೊಡಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ನೇತೃತ್ವದಲ್ಲಿ ಜಿಲ್ಲೆಯ 18 ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.