ದಾವಣಗೆರೆ: ಜಿಲ್ಲೆಯಲ್ಲಿ 60 ಮಂದಿಗೆ ಕೊರೊನಾ ಇರುವುದು ಬುಧವಾರ ದೃಢಪಟ್ಟಿದೆ. ವೃದ್ಧರೊಬ್ಬರು ಮೃತಪಟ್ಟಿದ್ದಾರೆ. 80 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಹರಿಹರ ಹವಳದ ಬೀದಿಯ 66 ವರ್ಷದ ವೃದ್ಧ ಉಸಿರಾಟದ ತೊಂದರೆ, ಅಧಿಕ ರಕ್ತದೊತ್ತಡ, ಮಧುಮೇಹದಿಂದ ನಿಧನರಾದರು.
ದಾವಣಗೆರೆ ತಾಲ್ಲೂಕಿನಲ್ಲಿ 26, ಹರಿಹರ ತಾಲ್ಲೂಕಿನಲ್ಲಿ 16, ಹೊನ್ನಾಳಿ–ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 11 ಹಾಗೂ ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 7 ಮಂದಿಗೆ ಕೊರೊನಾ ಬಂದಿದೆ.
ಜಿಲ್ಲೆಯಲ್ಲಿ ಈವರೆಗೆ 20,578 ಮಂದಿಗೆ ಸೋಂಕು ತಗುಲಿದೆ. 19,565 ಜನ ಗುಣಮುಖರಾಗಿದ್ದಾರೆ. 255 ಮಂದಿ ಮೃತಪಟ್ಟಿದ್ದಾರೆ. 758 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.