ADVERTISEMENT

ದಾವಣಗೆರೆ: 920 ಗ್ರಾಂ ಗಾಂಜಾ ವಶ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2020, 16:04 IST
Last Updated 1 ಸೆಪ್ಟೆಂಬರ್ 2020, 16:04 IST
ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿಯಲ್ಲಿ ಆರೋಪಿಗಳಿಂದ ಪೊಲೀಸರು ಗಾಂಜಾ ವಶಪಡಿಸಿಕೊಂಡರು. 
ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿಯಲ್ಲಿ ಆರೋಪಿಗಳಿಂದ ಪೊಲೀಸರು ಗಾಂಜಾ ವಶಪಡಿಸಿಕೊಂಡರು.    

ದಾವಣಗೆರೆ: ತಾಲ್ಲೂಕಿನ ಶಿರಮಗೊಂಡನಹಳ್ಳಿಯ ಆಂಜನೇಯ ಬ್ರಿಕ್ಸ್‌ ಫ್ಯಾಕ್ಟರಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿ ₹9500 ಮೌಲ್ಯದ 920 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಜಯನಗರದ ಶಾರೂಕ್‌ ಖಾನ್ (21), ಭದ್ರಾವತಿಯ ಮುಜಿಬುಲ್ಲಾ ಷರೀಫ್ (20) ಹಾಗೂ ಆಜಾದ್‌ನಗರದ ಮುಬಾರಕ್ ಖಾನ್ (20) ಬಂಧಿತರು.

ಮಾಹಿತಿಯ ಮಾಹಿತಿಯ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿದ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಮುಸ್ತಾಕ್ ಅಹಮ್ಮದ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳಿಂದ ಗಾಂಜಾದ ಜೊತೆಗೆ ₹1400 ವಶಪಡಿಸಿಕೊಂಡಿದ್ದು, ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.