ಹೊನ್ನಾಳಿ: ಹೊನ್ನಾಳಿ–ನ್ಯಾಮತಿ ಅವಳಿ ತಾಲ್ಲೂಕಿನ ಹಾಲುಮತ ಸಮಾಜದ ಬೃಹತ್ ಸಮಾವೇಶವನ್ನು ಮೇ. 1 ರಂದು ನಗರದ ಅಗಳ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಾಲುಮತ ಸಮಾಜದ ಜಿಲ್ಲಾ ಉಪಾಧ್ಯಕ್ಷ ದಿಡಗೂರು ಪಾಲಾಕ್ಷಪ್ಪ ಹೇಳಿದರು.
ಇಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸಮಾವೇಶದ ಮೂಲಕ ನಾವೆಲ್ಲ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಕೈ ಬಲಪಡಿಸಬೇಕಿದೆ ಎಂದು ಅವಳಿ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷ ಎಸ್.ಎಸ್. ಬೀರಪ್ಪ ಮಾತನಾಡಿದರು.
ಸಮಾಜದ ಸಮುದಾಯ ಭವನ ನಿರ್ಮಾಣ ಸಂಬಂಧ ಶಾಸಕ ರೇಣುಕಾಚಾರ್ಯ ಅವರಿಗೆ ಬೇಡಿಕೆ ಸಲ್ಲಿಸಿದ್ದು, ಚುನಾವಣೆ ನಂತರ ಶಾಸಕರಿಗೆ ಒತ್ತಾಯಿಸಲಾಗುವುದು ಎಂದು ಹಾಲುಮತ ಸಮಾಜದ ಮುಖಂಡ ಕುಬೇರಪ್ಪ ತಿಳಿಸಿದರು.
ಶಾಸಕ ಎಂ.ಪಿ. ರೇಣುಕಾಚಾರ್ಯ, ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಸಮಾಜದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ಪುರಸಭೆ ಮಾಜಿ ಅಧ್ಯಕ್ಷ ರಂಗನಾಥ್, ಸದಸ್ಯರಾದ ಧರ್ಮಪ್ಪ, ಮುಖಂಡರಾದ ಕೆ.ವಿ. ಚನ್ನಪ್ಪ, ಕನಕದಾಸ, ಹನುಮಂತಪ್ಪ, ಸಿದ್ದಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.