ಹರಪನಹಳ್ಳಿ: ಪಟ್ಟಣದ ಹಿರೆಕೆರೆ ವೃತ್ತದಲ್ಲಿ ಸ್ಕಾರ್ಪಿಯೊ ವಾಹನ ಚಲಾಯಿಸಿಕೊಂಡು ಬರುತ್ತಿದ್ದ ಅಪರಿಚಿತ ವ್ಯಕ್ತಿಗಳು ಪೊಲೀಸರನ್ನು ನೋಡಿ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಸೋಮವಾರ ಪರಾರಿಯಾದರು.
ನಾಲ್ಕು ಜನರು ಕೆಎ 02 ಎಮ್ಎ 2656 ಸ್ಕಾರ್ಪಿಯೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಪೊಲೀಸರನ್ನು ನೋಡಿದ ಅವರು, ದೂರದಲ್ಲಿಯೇ ವಾಹನ ನಿಲ್ಲಿಸಿ ಕೆರೆಯಂಗಳದಿಂದ ತಲೆಮರೆಸಿಕೊಂಡಿದ್ದಾರೆ. ಇದನ್ನು ಗಮನಿಸಿದ ಪೊಲೀಸರು ಅಪರಿಚಿತರನ್ನು ಬೆನ್ನತ್ತಿದರೂ ಸಿಗದೇ ಓಡಿಹೋಗಿದ್ದಾರೆ ಎನ್ನಲಾಗಿದೆ.
ನೆಲಮಂಗಲ ಕಳ್ಳತನದ ನಂಟು
ನೆಲಮಂಗಲ ಬಳಿ ಇರುವ ಎಲ್.ಜಿ. ಶೋರೂಂ ಉಗ್ರಾಣವನ್ನು ದೋಚುತ್ತಿದ್ದಾಗ ಒಬ್ಬ ಕಳ್ಳ ಸಿಕ್ಕಿಬಿದ್ದಿದ್ದಾನೆ. ಗುಂಪಿನಲ್ಲಿದ್ದ ನಾಲ್ವರು ತಮ್ಮ ಸ್ವಂತ ಸ್ಕಾರ್ಪಿಯೊ ವಾಹನ ಸಮೇತ ಪರಾರಿಯಾಗಿದ್ದರು. ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿ ವಾಹನದ ನಂಬರ್ ಸಮೇತ ರಾಜ್ಯದ ಎಲ್ಲ ಠಾಣೆಗಳಿಗೂ ಮಾಹಿತಿ ನೀಡಿದ್ದರು. ಆ ಪ್ರಕರಣಕ್ಕೆ ಸಂಬಂಧಪಟ್ಟ ವಾಹನವೇ ಇರಬಹುದು ಎಂದು ಸ್ಥಳೀಯ ಪೊಲೀಸರು ಶಂಕಿಸಿದ್ದು, ನೆಲಮಂಗಲ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಅಲ್ಲಿನ ಪೊಲೀಸರು ಸ್ಥಳಕ್ಕೆ ಬಂದ ಬಳಿಕ ಖಚಿತ ಮಾಹಿತಿ ಲಭ್ಯವಾಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.