ADVERTISEMENT

ದಾವಣಗೆರೆ | ಅತ್ಯಾಚಾರ ಆರೋಪ: ಪಾದ್ರಿ ಬಂಧನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2024, 15:50 IST
Last Updated 4 ಏಪ್ರಿಲ್ 2024, 15:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾವಣಗೆರೆ: ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಇಲ್ಲಿನ ಜಯನಗರದಲ್ಲಿನ ಚರ್ಚ್‌ ಒಂದರ ಪಾದ್ರಿ ಬಿ.ರಾಜಶೇಖರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ಚರ್ಚ್‌ಗೆ ಹೋಗುತ್ತಿದ್ದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ನನ್ನೊಂದಿಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದ. ಅಲ್ಲದೇ ನನ್ನಿಂದ ₹ 25ರಿಂದ ₹ 30 ಲಕ್ಷ ಹಣ ಪಡೆದು ವಂಚಿಸಿದ್ದಾನೆ. ಹಣ ವಾಪಸ್‌ ಕೇಳಿದ್ದಕ್ಕೆ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ್ದಾನೆ’ ಎಂದು ಸಂತ್ರಸ್ತ ಮಹಿಳೆ ದೂರು ನೀಡಿದ್ದರು.

ADVERTISEMENT

ಇಲ್ಲಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ 9ರಂದು ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ಆಂಧ್ರಪ್ರದೇಶದ ಹೈದರಾಬಾದ್‌ನಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ, ಕರೆತಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.