ADVERTISEMENT

ದಾವಣಗೆರೆ: ವಿಧಾನ ಪರಿಷತ್‌ನ ಮತ ಎಣಿಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 2:26 IST
Last Updated 1 ನವೆಂಬರ್ 2020, 2:26 IST

ದಾವಣಗೆರೆ: ಆಗ್ನೇಯ ಪದವೀಧರ ಕ್ಷೇತ್ರ ಸೇರಿದಂತೆ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳ ಮತ ಎಣಿಕೆಯನ್ನು ನ.2ರ ಬದಲು ನ.10ರಂದು ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಶನಿವಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ.

ರಾಜ್ಯದಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಅ.28ರಂದು ಮತದಾನ ನಡೆದಿದ್ದು, ನ.2ರಂದು ಮತ ಎಣಿಕೆ ನಡೆಯಬೇಕಿತ್ತು. ಆಯಾ ಚುನಾವಣಾಧಿಕಾರಿಗಳು ಸಿದ್ಧತೆಯ್ನೂ ಮಾಡಿಕೊಂಡಿದ್ದರು.

ಶಿರಾ ಮತ್ತು ಆರ್‌.ಆರ್. ನಗರ ವಿಧಾನಸಭಾ ಕ್ಷೇತ್ರಗಳಿಗೆ ನ.3ರಂದು ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಪರಿಷತ್ ಚುನಾವಣೆಯ ಮತ ಎಣಿಕೆ ಮುಂದೂಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.