ದಾವಣಗೆರೆ: ಒಂದು ತಿಂಗಳಲ್ಲಿ ಎರಡು ಸೆಮಿಸ್ಟರ್ಗಳ ಪರೀಕ್ಷೆ ಬರೆಯುವುದನ್ನು ವಿರೋಧಿಸಿ ಅಖಿಲ ಭಾರತ ಡೆಮೊಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಸನ್ (ಎಐಡಿಎಸ್ಒ) ನೇತೃತ್ವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಮನೆ, ಕಾಲೇಜು, ವಿಶ್ವವಿದ್ಯಾಲಯಗಳ ಎದುರಲ್ಲಿ ಬೇಡಿಕೆಗಳ ಫಲಕ ಹಿಡಿದು ಪ್ರತಿಭಟನೆ ನಡೆಸಿದರು.
ಕಳೆದ ಸೆಮಿಸ್ಟರ್ ಪರೀಕ್ಷೆ ನಡೆಸುವುದು ಅವೈಜ್ಞಾನಿಕ ನಿರ್ಧಾರ. ವಿದ್ಯಾರ್ಥಿಗಳ ಮೇಲೆ ವಿಪರೀತ ಹೊರೆ ಹೇರಬೇಡಿ. ಆಪ್ಲೈನ್ ತರಗತಿಗಳು ಆರಂಭವಾಗುವ ಮುನ್ನ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ನಿರೋಧಕ ಲಸಿಕೆ ನೀಡಿ ಎಂದು ಆಗ್ರಹಿಸಲಾಯಿತು ಎಂದು ಸಂಘಟನೆಯ ಕಾರ್ಯದರ್ಶಿ ಪೂಜಾ ನಂದಿಹಳ್ಳಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.