ADVERTISEMENT

ಆಂಜನೇಯ ಸ್ವಾಮಿ ತೆಪ್ಪೋತ್ಸವ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 4:47 IST
Last Updated 5 ಡಿಸೆಂಬರ್ 2022, 4:47 IST
ಮಲೇಬೆನ್ನೂರು ಸಮೀಪದ ಹಿಂಡಸಗಟ್ಟೆ ಗ್ರಾಮದ ಕಲ್ಯಾಣಿಯಲ್ಲಿ ಕಡೇ ಕಾರ್ತೀಕೋತ್ಸವದ ಪ್ರಯುಕ್ತ ಶನಿವಾರ ಕೊಕ್ಕನೂರು ಆಂಜನೇಯ ಸ್ವಾಮಿ ಹಾಗೂ ಸಿದ್ದೇಶ್ವರ ಸ್ವಾಮಿ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು
ಮಲೇಬೆನ್ನೂರು ಸಮೀಪದ ಹಿಂಡಸಗಟ್ಟೆ ಗ್ರಾಮದ ಕಲ್ಯಾಣಿಯಲ್ಲಿ ಕಡೇ ಕಾರ್ತೀಕೋತ್ಸವದ ಪ್ರಯುಕ್ತ ಶನಿವಾರ ಕೊಕ್ಕನೂರು ಆಂಜನೇಯ ಸ್ವಾಮಿ ಹಾಗೂ ಸಿದ್ದೇಶ್ವರ ಸ್ವಾಮಿ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು   

ಮಲೇಬೆನ್ನೂರು: ಸಮೀಪದ ಹಿಂಡಸಗಟ್ಟೆ ಗ್ರಾಮದಲ್ಲಿ ಕಡೇ ಕಾರ್ತಿಕೋತ್ಸವದ ಪ್ರಯುಕ್ತ ಶನಿವಾರ ತಡರಾತ್ರಿ ಕೊಕ್ಕನೂರು ಆಂಜನೇಯ ಸ್ವಾಮಿ ಹಾಗೂ ಸಿದ್ದೇಶ್ವರ ಸ್ವಾಮಿ ತೆಪ್ಪೋತ್ಸವ ಅದ್ಧೂರಿಯಾಗಿ ನಡೆಯಿತು.

ಉತ್ಸವಕ್ಕೂ ಮುನ್ನ ಮಂಗಳವಾದ್ಯ, ಭಜನೆ, ಡೊಳ್ಳು ಕುಣಿತ, ತಮಟೆ ಸೇರಿದಂತೆ ಜಾನಪದ ಕಲಾತಂಡಗಳೊಂದಿಗೆ ಉತ್ಸವಮೂರ್ತಿ ಮೆರವಣಿಗೆ ನಡೆಸಲಾಯಿತು.

ಮುಖ್ಯಬೀದಿಯನ್ನು ತಳಿರು ತೋರಣ, ವಿದ್ಯುತ್ ದೀಪಗಳಿಂದ ಶೃಂಗರಿಸಲಾಗಿತ್ತು. ನಂದಿಗುಡಿ ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಪೂಜಾ ಕಾರ್ಯ ನೆರವೇರಿಸಿದರು.

ADVERTISEMENT

ಭಕ್ತರು ದೀಪ ಬೆಳಗಿಸಿ ಕಲ್ಯಾಣಿ ಯಲ್ಲಿ ತೇಲಿ ಬಿಟ್ಟರು. ಸುತ್ತಮುತ್ತಲ ಗ್ರಾಮಸ್ಥರು ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.