ADVERTISEMENT

ಕಲಾವಿದನಿಂದ ಸಾಮಾಜಿಕ ಮಾಧ್ಯಮದ ಮೂಲಕ ಮತದಾನ ಜಾಗೃತಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 6:23 IST
Last Updated 12 ನವೆಂಬರ್ 2019, 6:23 IST
   

ದಾವಣಗೆರೆ: ದಾವಣಗೆರೆ ಸ್ಮಾರ್ಟ್ ಸಿಟಿಯಾಗುತ್ತಿದೆ. ಆದ್ದರಿಂದ ಸ್ಮಾರ್ಟ್ ಆಗಿರುವ ಅಭ್ಯರ್ಥಿಗಳನ್ನು ಗೆಲ್ಲಿಸಿ.

ದಾವಣಗೆರೆಯ ಕಲಾವಿದ ಆರ್.ಟಿ. ಅರುಣ್ ಕುಮಾರ್ ಅವರು ಮತದಾನ ಕುರಿತು ಜಾಗೃತಿ ಮೂಡಿಸುವ ವಿಡಿಯೊವನ್ನು ಸ್ನೇಹಿತರಿಗೆ ಹಲವು ವಾಟ್ಸ್ ಆ್ಯಪ್ ಗ್ರೂಪ್ ಗಳಿಗೆ ಶೇರ್ ಮಾಡಿದ್ದಾರೆ.

ನಗರ ಪ್ರದೇಶಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಸಾಮಾಜಿಕ ಮಾಧ್ಯಮ ಜನರಿಗೆ ಬಹಳ ಬೇಗ ತಲುಪುವುದರಿಂದ ಮತದಾರರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅರುಣ್ ಕುಮಾರ್ ಹೇಳುತ್ತಾರೆ.

ADVERTISEMENT

ವ್ಯವಸ್ಥೆ ಸರಿಯಿಲ್ಲ ಎಂದು ಜನರು ದೂರುವ ಬದಲು ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಮತದಾನದ ಬಗ್ಗೆ ಜಾಗೃತಿ ಮೂಡಿಸಲು 'ಮತದಾನ ಜಾಗೃತ ವೇದಿಕೆ'ಯನ್ನು ಆರಂಭಿಸಿದ್ದೇವೆ. ಎರಡು ವರ್ಷಗಳಿಂದ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.