ADVERTISEMENT

ಕೋವಿಡ್‌ನಿಂದ ಆಶಾ ಕಾರ್ಯಕರ್ತೆ ಸಾವು

​ಪ್ರಜಾವಾಣಿ ವಾರ್ತೆ
Published 17 ಜೂನ್ 2021, 4:51 IST
Last Updated 17 ಜೂನ್ 2021, 4:51 IST
ಚೆನ್ನಮ್ಮ
ಚೆನ್ನಮ್ಮ   

ಉಚ್ಚಂಗಿದುರ್ಗ: ಸಮೀಪದ ಕಮ್ಮತ್ತಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯರಬಳ್ಳಿ ಗ್ರಾಮದ ಆಶಾ ಕಾರ್ಯಕರ್ತೆ ಚೆನ್ನಮ್ಮ (39) ಬುಧವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೆಲ ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಚೆನ್ನಮ್ಮ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ.

ತೌಡೂರು ಗ್ರಾಮ ಪಂಚಾಯಿತಿ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯೆಯಾಗಿ ಗ್ರಾಮದಲ್ಲಿ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ADVERTISEMENT

‌ಅವರಿಗೆ ಪತಿ, ಪುತ್ರ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆಯನ್ನು ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.