ಹೊನ್ನಾಳಿ: ‘1966-67ರಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳಲ್ಲಿ ಜಾತಿ ‘ಹಿಂದೂ ಲಿಂಗಾಯತ’ ಎಂದಿದೆ. 2013-14ರಲ್ಲಿ ‘ಬೇಡ ಜಂಗಮ’ (ಎಸ್ಸಿ) ಆಗಿ ಬದಲಾಗಿದೆ. ಯಾರು, ಏಕೆ ಈ ಬದಲಾವಣೆ ಮಾಡಿದರು’ ಎಂದು ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಎಸ್ಸಿ, ಎಸ್ಟಿ ಪಂಗಡಗಳ ಮೀಸಲಾತಿ ಸಂರಕ್ಷಣಾ ಮಹಾ ಒಕ್ಕೂಟ ಪ್ರಶ್ನಿಸಿದೆ.
ಒಕ್ಕೂಟದ ಮುಖಂಡ ಕೊಡತಾಳ್ ರುದ್ರೇಶ್ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ, ಇದಕ್ಕೆ ಪೂರಕವಾಗಿ ರೇಣುಕಾಚಾರ್ಯ ಅವರ ಶಾಲಾ ದಾಖಲಾತಿಗಳ ಪ್ರತಿಗಳನ್ನು ಮಾಧ್ಯಮದವರಿಗೆ ಅವರು ತೋರಿಸಿದರು.
‘ಶಾಲಾ ದಾಖಲಾತಿಯಲ್ಲಿ ಬೇಡ ಜಂಗಮ (ಎಸ್ಸಿ) ಎಂದು ಬರೆಸಿದ್ದರೂ ನನಗೇನೂ ಗೊತ್ತಿಲ್ಲ ಎಂದು ಹೇಳುವ ರೇಣುಕಾಚಾರ್ಯ ಅವರು ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಲಿ’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.