ADVERTISEMENT

ಧರ್ಮಸ್ಥಳ ಸಂಸ್ಥೆಯಿಂದ ಜನ ಜಾಗೃತಿ: ಶಾಸಕ

​ಪ್ರಜಾವಾಣಿ ವಾರ್ತೆ
Published 9 ಜೂನ್ 2023, 12:37 IST
Last Updated 9 ಜೂನ್ 2023, 12:37 IST
ಹರಿಹರದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಶಾಸಕ ಬಿ.ಪಿ.ಹರೀಶ್‌ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಗೀತಾ ಬಿ, ಗಣಪತಿ ಮಾಳಂಜಿ, ಎಚ್.ಪಿ. ಮಾಳಂಜಿ, ಎಚ್.ಪಿ.ಬಾಬಣ್ಣ ಇದ್ದರು.
ಹರಿಹರದಲ್ಲಿ ಗುರುವಾರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಶಾಸಕ ಬಿ.ಪಿ.ಹರೀಶ್‌ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಗೀತಾ ಬಿ, ಗಣಪತಿ ಮಾಳಂಜಿ, ಎಚ್.ಪಿ. ಮಾಳಂಜಿ, ಎಚ್.ಪಿ.ಬಾಬಣ್ಣ ಇದ್ದರು.   

ಹರಿಹರ: ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಸಮಾಜಮುಖಿ ಕಾರ್ಯ ಚಟುವಟಿಕೆಗಳ ಮೂಲಕ ಸಮಾಜದಲ್ಲಿ ಜನಜಾಗೃತಿ ಮೂಡಿಸುತ್ತಿದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ನೂತನ ಶಾಸಕರಾಗಿದ್ದಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು .

‘ತಾಲ್ಲೂಕಿನಾದ್ಯಂತ ಸಾವಿರಾರು ಸದಸ್ಯರನ್ನು ಒಳಗೊಂಡಿರುವ ಸಂಸ್ಥೆಯು ಶೌಚಾಲಯ ಬಳಕೆ, ಪರಿಸರ ಸಂರಕ್ಷಣೆ, ಹೈನುಗಾರಿಕೆ, ಕೃಷಿ ಚಟುವಟಿಕೆ, ಬ್ಯಾಂಕಿಂಗ್ ವ್ಯವಹಾರ ಕುರಿತು ಜಾಗೃತಿ ಮೂಡಿಸುತ್ತಿರುವುದು ಪ್ರಶಂಸನೀಯ’ ಎಂದು ಹೇಳಿದರು.

ADVERTISEMENT

ಸಂಸ್ಥೆಯ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಬಿ, ತಾಲ್ಲೂಕು ಯೋಜನಾಧಿಕಾರಿ ಗಣಪತಿ ಮಾಳಂಜಿ, ಉದ್ಯಮಿ ಎಚ್.ಪಿ.ಬಾಬಣ್ಣ, ಕೊಂಡಜ್ಜಿ ರಾಜಶೇಖರ್ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.