ADVERTISEMENT

ಕರಡಿ ದಾಳಿ: ವೃದ್ಧನಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 2:08 IST
Last Updated 4 ನವೆಂಬರ್ 2020, 2:08 IST

ಚನ್ನಗಿರಿ: ತಾಲ್ಲೂಕಿನ ಬಯಲುದಿಬ್ಬ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ದನ ಮೇಯಿಸುತ್ತಿದ್ದ ವೃದ್ಧರೊಬ್ಬರಿಗೆ ಕರಡಿ ದಾಳಿ ನಡೆಸಿದ್ದು, ತೀವ್ರ ಗಾಯಗಳಾಗಿವೆ.

ಬಯಲುದಿಬ್ಬ ಗ್ರಾಮದ ಮಂಜಪ್ಪ (67) ಗಾಯಗೊಂಡವರು. ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಕರಡಿ ಮಂಜಪ್ಪ ಅವರ ಕಣ್ಣು, ಮೂಗು, ಮುಖಕ್ಕೆ ಗಾಯ ಮಾಡಿದೆ.

ಗಂಭೀರವಾಗಿ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿ ಮಾವಿನಹೊಳೆಯಪ್ಪ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.