ADVERTISEMENT

ದಾವಣಗೆರೆ: ಕೇಕ್‌ ಕತ್ತರಿಸಿ ಹೋರಿಯ ಹುಟ್ಟುಹಬ್ಬ ಆಚರಿಸಿದ ಯುವಕ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 3:43 IST
Last Updated 14 ಜುಲೈ 2021, 3:43 IST
ನ್ಯಾಮತಿ ತಾಲ್ಲೂಕು ಬೆಳಗುತ್ತಿ ಗ್ರಾಮದ ಮಂಜುನಾಥ ಎಂಬುವರು ತಮ್ಮ ನೆಚ್ಚಿನ ಹೋರಿ ಹುಟ್ಟುಹಬ್ಬವನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಆಚರಿಸಿದರು.
ನ್ಯಾಮತಿ ತಾಲ್ಲೂಕು ಬೆಳಗುತ್ತಿ ಗ್ರಾಮದ ಮಂಜುನಾಥ ಎಂಬುವರು ತಮ್ಮ ನೆಚ್ಚಿನ ಹೋರಿ ಹುಟ್ಟುಹಬ್ಬವನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಕೇಕ್ ಕತ್ತರಿಸಿ ಆಚರಿಸಿದರು.   

ಬೆಳಗುತ್ತಿ (ನ್ಯಾಮತಿ): ತಾಲ್ಲೂಕಿನ ಬೆಳಗುತ್ತಿ ಗ್ರಾಮದ ಯುವಕನೊಬ್ಬ ತನ್ನ ನೆಚ್ಚಿನ ಹೋರಿಯ ಹುಟ್ಟುಹಬ್ಬವನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ನೇತೃತ್ವದಲ್ಲಿ ಆಚರಿಸಿದ್ದಾನೆ.

ಬೆಳಗುತ್ತಿ ಗ್ರಾಮದ ಮಂಜುನಾಥ್ ಎಂಬ ಯುವಕ ತನ್ನ ನೆಚ್ಚಿನ ಹೋರಿ ತೀರ್ಥಗಿರಿ ಡಾನ್ಹೋರಿಯಾ ಹುಟ್ಟುಹಬ್ಬವನ್ನು ಶಾಸಕರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಸೋಮವಾರ ಆಚರಿಸಿದರು.

ಕಳೆದ 14 ವರ್ಷದಿಂದ ಹೋರಿ ಬೆದರಿಸುವ ಹಬ್ಬದಲ್ಲಿ ಈ ಹೋರಿಯನ್ನು ಯಾರಿಂದಲೂ ಹಿಡಿಯಲು ಆಗಿಲ್ಲ. ಕೊರಳಿಗೆ ಕಟ್ಟಿದ ಕೊಬ್ಬರಿಯನ್ನೂ ಯಾರಿಗೂ ಕೀಳಲು ಸಾಧ್ಯವಾಗಿಲ್ಲ ಎಂದು ಹೆಮ್ಮೆ ವ್ಯಕ್ತಪಡಿಸಿದರು ಗ್ರಾಮಸ್ಥರು.

ADVERTISEMENT

ಹೋರಿ ಸಾಕುವುದನ್ನು ಹವ್ಯಾಸ ಮಾಡಿಕೊಂಡಿರುವ ಮಂಜುನಾಥ್‌ ಅವರು ಹೋರಿಗೆ ಹಾಲು, ಹುರುಳಿ, ಮೊಟ್ಟೆ ಸೇರಿ ವಿವಿಧ ಆಹಾರಗಳನ್ನು ಪ್ರತಿನಿತ್ಯ ನೀಡುವ ಮೂಲಕ ಅತ್ಯಂತ ಪ್ರೀತಿಯಿಂದ ಸಾಕಿದ್ದಾರೆ. ಈ ಹೋರಿಯು ಸಾಕಷ್ಟು ಬಹುಮಾನ ತಂದು ಕೊಟ್ಟಿದೆ ಎನ್ನುತ್ತಾರೆ ಸ್ಥಳೀಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.