ADVERTISEMENT

ಭಾರಿ ಮಳೆಯಿಂದ ಕುಸಿದುಬಿದ್ದ ಸೇತುವೆ

​ಪ್ರಜಾವಾಣಿ ವಾರ್ತೆ
Published 6 ಮೇ 2022, 5:31 IST
Last Updated 6 ಮೇ 2022, 5:31 IST
ಬಸವಾಪಟ್ಟಣ ಸಮೀಪದ ಕಣಿವೆಬಿಳಚಿಯ ಭದ್ರಾನಾಲೆಯ ಸೇತುವೆ ಗುರುವಾರ ನಸುಕಿನಲ್ಲಿ ಭಾರಿ ಮಳೆಯಿಂದ ಕುಸಿದು ಬಿದ್ದಿದೆ.
ಬಸವಾಪಟ್ಟಣ ಸಮೀಪದ ಕಣಿವೆಬಿಳಚಿಯ ಭದ್ರಾನಾಲೆಯ ಸೇತುವೆ ಗುರುವಾರ ನಸುಕಿನಲ್ಲಿ ಭಾರಿ ಮಳೆಯಿಂದ ಕುಸಿದು ಬಿದ್ದಿದೆ.   

ಬಸವಾಪಟ್ಟಣ: ಸಮೀಪದ ಕಣಿವೆಬಿಳಚಿಯ ಗಡ್ಡದ ಪಕ್ಕದಲ್ಲಿ ಭದ್ರಾ ನಾಲೆಗೆ ನಿರ್ಮಿಸಲಾಗಿದ್ದ ಸೇತುವೆ ಗುರುವಾರ ನಸುಕಿನಲ್ಲಿ ಭಾರಿ ಮಳೆಯಿಂದ ಕುಸಿದು ಬಿದ್ದಿದೆ.

60 ವರ್ಷಗಳ ಹಿಂದೆ ಕಟ್ಟಲಾಗಿರುವ ಈ ಸೇತುವೆ ಜೀರ್ಣಗೊಂಡಿತ್ತು. ಸೇತುವೆಯ ಮೇಲ್ಭಾಗದ ಗುಡ್ಡದ ಅಂಚಿನಲ್ಲಿ ಸುಮಾರು 120 ಮನೆಗಳಿದ್ದು, ಅಲ್ಲಿ ಸುಮಾರು 300ಕ್ಕೂ ಹೆಚ್ಚು ಜನ ವಾಸವಾಗಿದ್ದಾರೆ. ಸೇತುವೆ ಕುಸಿತದಿಂದ ಅಲ್ಲಿಯ ಜನರು, ದೈನಂದಿನ ಕೆಲಸಕಾರ್ಯ, ವ್ಯಾಪಾರ ವ್ಯವಹಾರ, ಕೃಷಿ ಮುಂತಾದ ಚಟುವಟಿಕೆಗಳಿಗೆ ಹೋಗಲು ಆಗುತ್ತಿಲ್ಲ. ಅಲ್ಲದೇ ಈ ಮನೆಗಳ ಸಮೀಪದಲ್ಲಿಯೇ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಲೂ ಸಹ ಕಣಿವೆಬಿಳಚಿ ಮತ್ತು ಸುತ್ತಲಿನ ರೋಗಿಗಳಿಗೂ ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ತೊಂದರೆಯಾಗಿದೆ. ಜಿಲ್ಲಾಡಳಿತ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಒಂದು ತಾತ್ಕಾಲಿಕ ಸೇತುವೆಯನ್ನು ನಿರ್ಮಿಸಿ ಗ್ರಾಮಸ್ಥರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಂಜಿನಪ್ಪ, ಸದಸ್ಯರಾದ ಎಸ್‌.ಅಣ್ಣೋಜಿರಾವ್‌, ಆಶಾಬಾಯಿ, ವಿಷ್ಣುಮೂರ್ತಿ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ನೀರಾವರಿ ಇಲಾಖೆಯ ಎ.ಇ.ಇ. ಧನಂಜಯ ನಾಯ್ಕ ಭೇಟಿ ನೀಡಿದ್ದು ಈ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೇಜಸ್ವಿ ಪಟೇಲ್‌ ಭೇಟಿ ನೀಡಿ ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದರು.

ADVERTISEMENT

ಕೂಡಲೇ ಸರ್ಕಾರ ಇದಕ್ಕೆ ಸೂಕ್ತ ಪರಿಹಾರಕಾರ್ಯ ಕೈಗೊಳ್ಳಬೇಕು ಎಂದು ಅಲ್ಲಿಯ ನಿವಾಸಿಗಳು ಮನವಿ ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.