ದಾವಣಗೆರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧವೇ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆ ಪ್ರಕರಣದ ನಂತರ ಮೊದಲ ಬಾರಿಗೆ ಭಾನುವಾರ ಸಿ.ಎಂ. ಜತೆಗೆ ವೇದಿಕೆ ಹಂಚಿಕೊಂಡರು. ಆದರೆ ಪರಸ್ಪರ ಮುಖ ಕೊಟ್ಟು ಮಾತನಾಡಲಿಲ್ಲ.
ಕಾಗಿನೆಲೆ ಕನಕಪೀಠದ ಹರಿಹರ ಬೆಳ್ಳೂಡಿ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಬ್ಬರೂ ಅಂತರ ಕಾಯ್ದುಕೊಂಡದ್ದು ಎದ್ದುಕಂಡಿತು. ‘ಕನಕ ಜಯಂತಿಗೆ ರಜೆ ನೀಡಿದವರು ಮುಖ್ಯಮಂತ್ರಿ ಯಡಿಯೂರಪ್ಪ’ ಎಂದುಭಾಷಣ ಮಾಡುವಾಗ ಈಶ್ವರಪ್ಪ ಪ್ರಸ್ತಾಪಿಸಿದರಾದರೂ ಅವರ ನಡುವೆ ಆತ್ಮೀಯತೆ ಕಂಡುಬರಲಿಲ್ಲ.
ಕಾರ್ಯಕ್ರಮಕ್ಕಿಂತ ಮೊದಲು ಸುದ್ದಿಗಾರರ ಜತೆಗೆ ಮಾತನಾಡಲು ಈಶ್ವರಪ್ಪ ನಿರಾಕರಿಸಿದರು. ಯಡಿಯೂರಪ್ಪ ಮಾತನಾಡಿದರಾದರೂ, ಈಶ್ವರಪ್ಪ ಅವರ ಪತ್ರದ ಬಗ್ಗೆ ಕೇಳಿದಾಗ, ‘ಅದೆಲ್ಲ ಯಾಕೆ ಚರ್ಚೆ ಮಾಡುತ್ತೀರಿ’ ಎಂದಷ್ಟೇ ಪ್ರತಿಕ್ರಿಯಿಸಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.