ದಾವಣಗೆರೆ: ಬಿಎಸ್ಎಫ್ ಯೋಧ ಸಿ.ಆರ್. ಈರೇಶ್ (49) ಅವರು ಹೃದಯಾಘಾತದಿಂದ ಬುಧವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ನಗರದ ನಿಜಲಿಂಗಪ್ಪ ಬಡವಣೆಯ 2ನೇ ಮೇನ್ 7ನೇ ಕ್ರಾಸ್ ನಿವಾಸಿ ಈರೇಶ್ ಅವರು, 25ವರ್ಷಗಳಿಂದ ಸೇನೆಯಲ್ಲಿದ್ದರು. ಜಮ್ಮು ಕಾಶ್ಮೀರ, ಪಂಜಾಬ್, ದೆಹಲಿ, ಅಸಾಂನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವಾಗ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ.
ಗುರುವಾರ ಬೆಳಿಗ್ಗೆ 11ಕ್ಕೆ ಗಾಂಧಿನಗರದ ಹಿಂದೂ ರುದ್ರಭೂಮಿಯಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.