ಹರಪನಹಳ್ಳಿ:ತಾಲ್ಲೂಕಿನ ಮೈದೂರು ಗ್ರಾಮದಲ್ಲಿಸಾಲದ ಹೊರೆಯಿಂದ ರೈತರೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ. ಗೌಡಜ್ಜ (40) ಆತ್ಮಹತ್ಯೆ ಮಾಡಿಕೊಂಡವರು.
ಅವರು ಐದು ಎಕರೆ ಜಮೀನಿನಲ್ಲಿ ಸಾಲ ಮಾಡಿ ಬಿತ್ತನೆ ಮಾಡಿದ್ದರು. ಇಳುವರಿ ಕುಂಠಿತವಾಗಿ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಬ್ಯಾಂಕಿನಲ್ಲಿ ₹ 1.50 ಲಕ್ಷ ಹಾಗೂ ಖಾಸಗಿಯಾಗಿ ₹ 3 ಲಕ್ಷ ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.