ಹರಪನಹಳ್ಳಿ: ತಾಲ್ಲೂಕಿನ ಬಳಿಗನೂರು ಗ್ರಾಮದಲ್ಲಿ ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಡಿಕೊಂಡಿದ್ದಾರೆ.
ಎಸ್.ಎಲ್.ನಾರನಗೌಡ (48) ಆತ್ಮಹತ್ಯೆ ಮಾಡಿಕೊಂಡವರು. ಎರಡು ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಮತ್ತು ಟೊಮೊಟೊ ಬೆಳೆ ಬೆಳೆದಿದ್ದರು. ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸಿದ್ದರು. ಬೆಳೆ ಬೆಳೆಯಲು ಕೊಟ್ಟೂರಿನ ಕಾರ್ಪೊರೇಷನ್ ಬ್ಯಾಂಕ್ನಲ್ಲಿ ₹1 ಲಕ್ಷ, ಕೈಗಡವಾಗಿ ₹2 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಬೇಸತ್ತು ಸೋಮವಾರ ಬೆಳಿಗ್ಗೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರಿಗೆ ಪತ್ನಿ ಇಬ್ಬರು ಪುತ್ರರು ಇದ್ದಾರೆ. ಘಟನಾ ಸ್ಥಳಕ್ಕೆ ಚಿಗಟೇರಿ ಠಾಣೆ ಪಿಎಸ್ಐ ನಾಗರಾಜ ಮತ್ತು ಕಂದಾಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.