ADVERTISEMENT

ಕಾನೂನು ಚೌಕಟ್ಟಿನಲ್ಲೇ ಮರಳು ಸಾಗಿಸಿ

ಮರುಳು ಗುತ್ತಿಗೆ ಪ್ರದೇಶಕ್ಕೆ ಭೇಟಿ ನೀಡಿದ ಸಚಿವ ರಾಜಶೇಖರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 15:52 IST
Last Updated 2 ಜುಲೈ 2019, 15:52 IST
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಮರಳು ಗುತ್ತಿಗೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಬಿ. ಪಾಟೀಲ್ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ಮರಳು ಗುತ್ತಿಗೆ ಪ್ರದೇಶಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಬಿ. ಪಾಟೀಲ್ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದರು   

ದಾವಣಗೆರೆ: ಗಣಿ ಮತ್ತು ಭೂವಿಜ್ಞಾನ ಸಚಿವ ರಾಜಶೇಖರ ಬಿ. ಪಾಟೀಲ ಮಂಗಳವಾರ ಹರಿಹರ ತಾಲೂಕಿನ ರಾಜನಹಳ್ಳಿಯ ಮರಳು ಗುತ್ತಿಗೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮರಳು ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಎತ್ತುವ ಕಾರ್ಯ ನಡೆಸುತ್ತಿದ್ದಾರೆ. ಒಂದು ಮೀಟರ್‌ ಅಡಿಯಷ್ಟೇ ಮರಳು ತೆಗೆಯಬೇಕು ಎಂದು ನಿಯಮ ಇದ್ದರೂ 10–15 ಅಡಿ ಆಳದಷ್ಟು ತೆಗೆಯುತ್ತಿದ್ದಾರೆ. ಗ್ರಾಮ ಪಂಚಾಯಿತಿಗೆ ಯಾವುದೇ ಮಾಹಿತಿ ನೀಡುತ್ತಿಲ್ಲ. ರಾಯಲ್ಟಿ ಶೇ 20 ಗ್ರಾಮ ಪಂಚಾಯಿತಿಗೆ ಬರಬೇಕು. ಆದರೆ ಇವರು ಓವರ್‌ಲೋಡ್‌ ಮಾಡಿ ಕಳುಹಿಸುವುದರಿಂದ ನಷ್ಟವಾಗುತ್ತಿದೆ. ಭದ್ರತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ರಾಜನಹಳ್ಳಿ ಪಂಚಾಯಿತಿ ಅಧ್ಯಕ್ಷ ಮಹಾಂತೇಶ್‌, ಸದಸ್ಯ ಮಂಜುನಾಥ್‌ ಆರೋಪಿಸಿದರು.

ಗುತ್ತಿಗೆದಾರರು ಮರಳು ನೀತಿ ನಿಯಮಾವಳಿಯಡಿ ಕಾರ್ಯನಿರ್ವಹಿಸಬೇಕು. ಜನಸಾಮಾನ್ಯರಿಗೆ ತೊಂದರೆ ಆಗದಂತೆ ಹಾಗೂ ವಾಹನಗಳಲ್ಲಿ ಹೆಚ್ಚುವರಿ ಮರಳು ಸಾಗಾಟ ಮಾಡಬಾರದು. ಗ್ರಾಮ ಪಂಚಾಯಿತಿಗೆ ಮಾತ್ರವಲ್ಲ, ಸಾರ್ವಜನಿಕರಿಗೂ ಮಾಹಿತಿ ನೀಡಬೇಕು. ಗ್ರಾಮ ಪಂಚಾಯಿತಿ ಸಭೆಗಳಿಗೆ ಗುತ್ತಿಗೆದಾರರು ಹೋಗಬೇಕು ಎಂದು ಸಚಿವರು ಸೂಚಿಸಿದರು.

ADVERTISEMENT

ತಹಶೀಲ್ದಾರ್ ರೆಹಾನ್ ಪಾಷ, ಪಿಡಿಒ ವಿಜಯಲಕ್ಷ್ಮೀ, ಗ್ರಾಮ ಪಂಚಾಯಿತಿ ಸದಸ್ಯರಾದ ರೇಣುಕಮ್ಮ, ಲಕ್ಷ್ಮಪ್ಪ, ವೀರಬಸಯ್ಯ, ಬಣಕಾರ್ ಹಾಲಪ್ಪ, ಮಂಜುನಾಥ್, ಮಂಜುಳಾ ಗೀರಿಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.