ADVERTISEMENT

ನಿಖಿಲ್‌ ಕೊಂಡಜ್ಜಿ ಮೇಲೆ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 21 ಮೇ 2021, 3:13 IST
Last Updated 21 ಮೇ 2021, 3:13 IST

ದಾವಣಗೆರೆ: ಹರಿಹರ ತಾಲ್ಲೂಕು ಕೊಂಡಜ್ಜಿಯಲ್ಲಿರುವ ಸ್ಕೌಟ್ಸ್‌ ಮತ್ತು ಗೈಡ್ಸ್‌ ಭವನದಲ್ಲಿ ಪಾರ್ಟಿ ಮಾಡಿದ ಆರೋಪದಲ್ಲಿ ಯುವ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ನಿಖಿಲ್‌ ಕೊಂಡಜ್ಜಿ ಮೇಲೆ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಚೆಗೆ ಮದುವೆಯಾಗಿದ್ದ ಅವರು ತನ್ನ ಸ್ನೇಹಿತರಿಗೆ ಈ ಭವನದಲ್ಲಿ ಹಗಲೇ ಪಾರ್ಟಿ ಕೊಡಿಸಿದ್ದಾರೆ ಎಂದು ಸ್ಥಳೀಯ ಯುವಕರು ಮಾಡಿರುವ ವಿಡಿಯೊ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT