ADVERTISEMENT

ಪೆಟ್ರೋಲ್ ಕೇಳುವ ನೆಪದಲ್ಲಿ ಮಾಂಗಲ್ಯ ಸರ ಕಸಿದು ಪರಾರಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 5:05 IST
Last Updated 1 ಜುಲೈ 2021, 5:05 IST

ಚನ್ನಗಿರಿ: ಪೆಟ್ರೋಲ್ ಕೇಳುವ ನೆಪದಲ್ಲಿ ಬಂದ ಕಳ್ಳರು ತಾಲ್ಲೂಕಿನ ಗರಗ ಗ್ರಾಮದಲ್ಲಿ ಒಂಟಿ ಮನೆಯಲ್ಲಿದ್ದ ವೃದ್ಧೆಯಿಂದ 3 ತೊಲ ಬಂಗಾರದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.

ರತ್ನಮ್ಮ ಚಿನ್ನದ ಸರ ಕಳೆದುಕೊಂಡವರು. ರಾತ್ರಿ 8.30ರ ವೇಳೆ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ವೃದ್ಧೆಯ ಬಳಿ ಪೆಟ್ರೋಲ್ ಇದೆಯಾ ಎಂದು ಕೇಳಿದರು. ಆ ಬಳಿಕ ಕುಡಿಯಲು ನೀರು ಕೇಳಿದ್ದಾರೆ. ನೀರು ತರಲೆಂದು ರತ್ನಮ್ಮ ಅವರು ಒಳಗೆ ಹೋಗುತ್ತಿದ್ದಾಗ ಈ ಇಬ್ಬರು ರತ್ನಮ್ಮ ಅವರನ್ನು ಭದ್ರವಾಗಿ ಹಿಡಿದುಕೊಂಡು ಕೊರಳಲ್ಲಿ ಇದ್ದ ₹1.26 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.