ಚನ್ನಗಿರಿ: ತಾಲ್ಲೂಕಿನ ಚಿಕ್ಕೂಲಿಕೆರೆ ಗ್ರಾಮದಲ್ಲಿರುವ ಸಿದ್ದೇಶ್ವರ ಅರೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಬೀಗ ಹಾಕಲಾಗಿದ್ದು, 120 ವಿದ್ಯಾರ್ಥಿಗಳ ಭವಿಷ್ಯ ಅಂತ್ರದಲ್ಲಿದೆ.
ಕಾಲೇಜಿನಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳನ್ನು ವಿವಿಧ ಪ್ರಯೋಗಾಲಯಗಳಿಗೆ ನಿಯೋಜಿಸಲಾಗಿದೆ. ಕಾಲೇಜು ಕಟ್ಟಡದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಸೃಷ್ಟಿಯಾಗಿದೆ ಎನ್ನಲಾಗಿದೆ.
‘ಕಟ್ಟಡದ ಕ್ರಯಪತ್ರ ಅಡವಿಟ್ಟು ಸಾಲ ಪಡೆಯಲಾಗಿತ್ತು. 8 ದಿನಗಳ ಹಿಂದೆ ಸಾಲಗಾರರು ಪೀಠೋಪಕರಣ ಹೊರಹಾಕಿ ಕಟ್ಟಡಕ್ಕೆ ಬೀಗ ಹಾಕಿದ್ದಾರೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗದಂತೆ ಪ್ರಯೋಗಾಲಯಗಳಿಗೆ ನಿಯೋಜಿಸಲಾಗಿದೆ’ ಎಂದು ಸಿದ್ದೇಶ್ವರ ಅರೆ ವೈದ್ಯಕೀಯ ಕಾಲೇಜು ಸಂಸ್ಥಾಪಕಿ ರೂಪಾ ಸ್ಪಷ್ಟನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.