ದಾವಣಗೆರೆ: ಕುಡಿದ ಮತ್ತಿನಲ್ಲಿ ಮಗುವನ್ನು ಎತ್ತಿಕೊಂಡು ಹೋಗುತ್ತಿದ್ದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಡ್ಲೇಬಾಳ್ ನಿವಾಸಿ ಪರಶುರಾಮ ಆರೋಪಿ. ಇಲ್ಲಿನ ಬಿಎಸ್ಎನ್ಎಲ್ ಕಚೇರಿ ಹಿಂಭಾಗದಲ್ಲಿರುವ ಶಂಕರವಿಹಾರದಲ್ಲಿ ಐದು ವರ್ಷದ ಹೆಣ್ಣುಮಗು ಆಟವಾಡುತ್ತಿತ್ತು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿ ಎತ್ತಿಕೊಂಡು ಓಡಲು ಯತ್ನಿಸಿದ್ದ. ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅತ್ಯಾಚಾರ ಎಸಗಲು ಆತ ಒಯ್ಯುತ್ತಿದ್ದ ಎಂದು ಮಹಿಳಾ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.