ಜಗಳೂರು: ಸಮೀಪದ ಮಾಳಮ್ಮನಹಳ್ಳಿ ಗೋಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಪಟ್ಟಣದ ಅಶ್ವತ್ಥ್ ರೆಡ್ಡಿ ನಗರದ ಅಭಿ (14) ಹಾಗೂ ಮನೋಜ್ (15) ಮೃತಪಟ್ಟವರು.
ಭಾನುವಾರ ಮಧ್ಯಾಹ್ನ ಗೋಕಟ್ಟೆಯಲ್ಲಿ ಈಜಲು ಹೋಗಿದ್ದಾಗ ಅಭಿ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹೋದ ಮನೋಜ್ ಮೃತಪಟ್ಟಿದ್ದಾನೆ.
ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.