ADVERTISEMENT

ಎಸ್‌ಪಿಬಿಗೆ ಹಾಡುಗಳಿಂದ ಶ್ರದ್ಧಾಂಜಲಿ ಅರ್ಪಣೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 7:12 IST
Last Updated 28 ಸೆಪ್ಟೆಂಬರ್ 2020, 7:12 IST
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಜಿಲ್ಲಾ ಪಂಚಾಯಿತಿ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಜಿಲ್ಲಾ ಪಂಚಾಯಿತಿ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ದಾವಣಗೆರೆ: ಮಹಾನ್ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಅವರು ಹಾಡಿರುವ ಹಾಡುಗಳನ್ನು ಹಾಡುವ ಮೂಲಕ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಅವರು ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರೇಮ್ ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಶನಿವಾರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಎಸ್‌ಪಿಬಿ ಅವರು ದೇಶದ ಬಹುತೇಕ ಭಾಷೆಗಳನ್ನು ಕರಗತ ಮಾಡಿಕೊಂಡು ಆಯಾ ಭಾಷೆಗಳನ್ನು ಅರ್ಥ ಮಾಡಿಕೊಂಡು ಹಾಡುವುದರ ಮೂಲಕ ಜನರಯ ಮೆಚ್ಚಿನ ಗಾಯಕರಾಗಿದ್ದರು. ರಾಜ್ಯ ಸರ್ಕಾರ ಎಸ್‌ಪಿಬಿ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಗಾಯಕರಾದ ಸುರೇಶ್ ಕೆ., ಜೀವನ್, ಕೆ. ವಾಗೀಶ್, ಜೂನಿಯರ್ ವಿಷ್ಣುವರ್ಧನ್ ಪರಮೇಶ್, ಸುದರ್ಶನ್, ಕಾಂತರಾಜ್, ನಾಟಕ ಕಲಾವಿದರ ದುರುಗೇಶ್, ಪರಶುರಾಮ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.