ಹರಿಹರ: ಕಾಂಗ್ರೆಸ್ ಕರೆ ನೀಡಿದ್ದ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ನಿಂದ ನಗರದ ಶಿವಮೊಗ್ಗ ರಸ್ತೆಯಲ್ಲಿರುವ ಪಕ್ಷದ ಕಚೇರಿ ಎದುರು ಅಡುಗೆ ಅನಿಲ ಸಿಲಿಂಡರ್ಗಳಿಗೆ ಹೂವಿನ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು.
ಶಾಸಕ ಎಸ್. ರಾಮಪ್ಪ ಮಾತನಾಡಿ, ‘ಇಂಧನ ಸೇರಿ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಬಿಜೆಪಿ ಸರ್ಕಾರದ ದುಬಾರಿ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ’ ಎಂದು ಟೀಕಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ನಗರಸಭಾ ಸದಸ್ಯರಾದ ಶಂಕರ್ ಖಟಾವಕರ್, ಎಂ.ಎಸ್. ಬಾಬುಲಾಲ್, ಮಾಜಿ ಸದಸ್ಯ ಬಿ. ರೇವಣಸಿದ್ದಪ್ಪ, ಹೆಂಚಿನ ನಾಗಣ್ಣ, ಮುಖಂಡರಾದ ದಾದಾಪೀರ್ ಭಾನುವಳ್ಳಿ, ಮೊಹಮದ್ ಫೈರೋಜ್, ಸೈಯದ್ ಸನಾಉಲ್ಲಾ, ಹನುಮಂತಪ್ಪ, ಎಂ.ಎಸ್. ಆನಂದ, ಎಚ್. ಶಿವಪ್ಪ, ಗೀತಾ ಕದರಮಂಡಲಿಗಿ, ಬಿ. ರಮೇಶ್, ಹನುಮಂತಪ್ಪ, ಕೆ. ಜಡಿಯಪ್ಪ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.