ADVERTISEMENT

ಕಾಂಗ್ರೆಸ್‌ನವರು ತಬ್ಬಲಿ ಮಕ್ಕಳು‌; ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 7:18 IST
Last Updated 21 ಏಪ್ರಿಲ್ 2022, 7:18 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ   

ದಾವಣಗೆರೆ: ‘ಬಿಜೆಪಿಗೆ ನರೇಂದ್ರ ಮೋದಿ ಇದ್ದಾರೆ. ಕಾಂಗ್ರೆಸ್‌ನವರಿಗೆ ಯಾರಿದ್ದಾರೆ? ಅವರು ತಬ್ಬಲಿ ಮಕ್ಕಳು’ ಎಂದು ಬಿಜೆಪಿ ರಾಜ್ಯ ನಾಯಕ ಬಿ.ಎಸ್‌. ಯಡಿಯೂರಪ್ಪ ವ್ಯಂಗ್ಯವಾಡಿದರು.

ನಗರದಲ್ಲಿ ಬುಧವಾರ ಮಾತನಾಡಿದ ಅವರು, ‘ಕಾಂಗ್ರೆಸ್‌ ದೇಶದಾದ್ಯಂತ ನೆಲೆ ಕಳೆದುಕೊಂಡಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ ಕ್ಷೇತ್ರಗಳಲ್ಲಿ 377 ಕಡೆ ಠೇವಣಿಯನ್ನು ಕಳೆದುಕೊಂಡಿದೆ. 2 ಕಡೆ ಮಾತ್ರ ಗೆದ್ದಿದ್ದಾರೆ. ರಾಜ್ಯದಲ್ಲಿ ಇನ್ನೂ ಸ್ವಲ್ಪ ಉಸಿರಾಡುತ್ತಿದೆ. ಅದೇ ಕಾರಣದಿಂದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಏನೇನೋ ಮಾತನಾಡುತ್ತಿದ್ದಾರೆ. ಮುಂದಿನ ಚುನಾವಣೆಯ ನಂತರ ಇಲ್ಲೂ ಉಸಿರು ನಿಂತು ಹೋಗಲಿದೆ. ಇದು ದುರಹಂಕಾರದ ಮಾತಲ್ಲ. ರಾಜ್ಯದಲ್ಲಿ ಈಗ ಬಿಜೆಪಿಗಿರುವ ಅನುಕೂಲಕರ ವಾತಾವರಣ ಹಾಗಿದೆ. ಕಾಂಗ್ರೆಸ್‌ ಮುಳುಗುತ್ತಿರುವ ಹಡಗು’ ಎಂದು ತಿಳಿಸಿದರು.

ಕಂದಾಯ ಸಚಿವ ಆರ್. ಅಶೋಕ್‌, ‘ನಮ್ಮಲ್ಲಿ ಮೋದಿ, ಅಮಿತ್‌ ಶಾ, ನಡ್ಡಾ ಮುಂತಾದ ಕೇಂದ್ರ ನಾಯಕರು ಬಂದು ಭಾಷಣ ಮಾಡುತ್ತಾರೆ. ಕಾಂಗ್ರೆಸ್‌ನಲ್ಲಿ ಯಾರೂ ಇಲ್ಲ. ರಾಹುಲ್‌ ಗಾಂಧಿ ಬಂದು ಭಾಷಣ ಮಾಡಿದರೆ ಇದ್ದ ವೋಟು ಕಳೆದುಕೊಳ್ಳುತ್ತಾರೆ’ ಎಂದು ಅಣಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.