ದಾವಣಗೆರೆ: ಜಿಲ್ಲೆಯಲ್ಲಿ 17 ಮಂದಿಗೆ ಕೊರೊನಾ ಇರುವುದು ಶುಕ್ರವಾರ ದೃಢಪಟ್ಟಿದೆ. 30 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ದಾವಣಗೆರೆ ತಾಲ್ಲೂಕಿನಲ್ಲಿ 9, ಹರಿಹರ ತಾಲ್ಲೂಕಿನಲ್ಲಿ 4, ಚನ್ನಗಿರಿ ತಾಲ್ಲೂಕಿನಲ್ಲಿ 3, ಹೊನ್ನಾಳಿ ತಾಲ್ಲೂಕಿನಲ್ಲಿ ಒಬ್ಬರಿಗೆ ಕೊರೊನಾ ಇರುವುದು ಖಚಿತವಾಗಿದೆ. ಜಗಳೂರು ತಾಲ್ಲೂಕಿನಲ್ಲಿ ಯಾರಿಗೂ ಕೊರೊನಾ ಸೋಂಕು ದೃಢಪಟ್ಟಿಲ್ಲ.
ಜಿಲ್ಲೆಯಲ್ಲಿ ಈವರೆಗೆ 21,372 ಮಂದಿಗೆ ಸೋಂಕು ತಗುಲಿದೆ. 20,870 ಮಂದಿ ಗುಣಮುಖರಾಗಿದ್ದಾರೆ. 263 ಮಂದಿ ಮೃತಪಟ್ಟಿದ್ದಾರೆ. 239ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.