ದಾವಣಗೆರೆ: ಜಿಲ್ಲೆಯಲ್ಲಿ 13 ಮಂದಿಗೆಕೊರೊನಾಇರುವುದು ಗುರುವಾರ ದೃಢಪಟ್ಟಿದೆ. 14 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ದಾವಣಗೆರೆ ತಾಲ್ಲೂಕಿನಲ್ಲಿ 10, ಹೊನ್ನಾಳಿಯಲ್ಲಿ ಇಬ್ಬರಿಗೆ, ಚನ್ನಗಿರಿಯಲ್ಲಿ ಒಬ್ಬರಿಗೆ ಸೋಂಕು ತಗುಲಿದೆ.ಜಿಲ್ಲೆಯಲ್ಲಿ ಈವರೆಗೆ 22,086 ಮಂದಿಗೆ ಸೋಂಕು ತಗುಲಿದೆ. 21,742 ಮಂದಿ ಗುಣಮುಖರಾಗಿದ್ದಾರೆ. 264 ಮಂದಿ ಮೃತಪಟ್ಟಿದ್ದಾರೆ. 80 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಈವರೆಗೆ 6,924 ಮಂದಿ ಬೋಧಕ ಸಿಬ್ಬಂದಿ, 2,325 ಬೋಧಕೇತರ ಸಿಬ್ಬಂದಿ, 18,228 ವಿದ್ಯಾರ್ಥಿಗಳು ಕೊರೊನಾಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಇದುವರೆಗೆ 33ಬೋಧಕ ಸಿಬ್ಬಂದಿ, 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗುರುವಾರದ ಪರೀಕ್ಷಾ ವರದಿಯಲ್ಲಿ ಯಾವುದೇ ಶಿಕ್ಷಕರು, ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.