ಮಲೇಬೆನ್ನೂರು: ಕೊರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಪಟ್ಟಣದ ಡಿಎಆರ್ ಹೆಡ್ ಕಾನ್ಸ್ಟೆಬಲ್ ಶಿವರಾಜ್ (42) ಗುರುವಾರ ಮೃತಪಟ್ಟಿದ್ದಾರೆ.
ಆ.6ರಂದು ಗಂಟಲು ದ್ರವ ಮಾದರಿ ನೀಡಿದ್ದರು. ಕೊರೊನಾ ಇರುವುದು ಮೂರು ದಿನಗಳ ಹಿಂದೆ ಖಚಿತವಾಗಿತ್ತು. ಚಿಕಿತ್ಸೆಗಾಗಿ ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ಮೊದಲ ಪೊಲೀಸ್ ಇವರು. ಕೆಲವು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಪೊಲೀಸ್ ಒಬ್ಬರು ಮೃತಪಟ್ಟಿದ್ದರು.
ಸಮೀಪದ ಹಾಲಿವಾಣ ಗ್ರಾಮದ 85 ವರ್ಷದ ವೃದ್ಧೆ, ವಾಸನ ಗ್ರಾಮದ ತಾಲ್ಲೂಕು ಪಂಚಾಯತಿ ಸದಸ್ಯ ಜಿ.ಸಿ. ಬಸವರಾಜ್ ಮೃತಪಟ್ಟಿದ್ದಾರೆ.
ಪೊಲೀಸ್ ಇಲಾಖೆ ಸಹೋದ್ಯೋಗಿಗಳು ಪಿಎಸ್ಐ ವೀರಬಸಪ್ಪ ಕುಸಲಾಪುರ ನೇತೃತ್ವದಲ್ಲಿ ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.