ADVERTISEMENT

ಕೊರೊನಾ: ಗುಣಮುಖರಾಗಿ 10 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 15:43 IST
Last Updated 14 ಜೂನ್ 2020, 15:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿ ಭಾನುವಾರ 10 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಭಾನುವಾರ ಸೋಂಕು ಇರುವ ಪ್ರಕರಣ ಪತ್ತೆಯಾಗಿಲ್ಲ.

24 ಪ್ರಕರಣಗಳು ನೆಗೆಟಿವ್‌ ಎಂದು ಫಲಿತಾಂಶ ಬಂದಿದೆ. ಭಾನುವಾರ 82 ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದೂ ಒಳಗೊಂಡಂತೆ 478 ಮಾದರಿಗಳ ಫಲಿತಾಂಶ ಬರಲು ಬಾಕಿ ಇದೆ.

ಜಿಲ್ಲೆಯಲ್ಲಿ ಈವರೆಗೆ 226 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 194 ಮಂದಿ ಬಿಡುಗಡೆಗೊಂಡಿದ್ದಾರೆ. 6 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ 26 ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.