ADVERTISEMENT

ಶಿವಮೊಗ್ಗ ಮಾದರಿಯಲ್ಲಿ ನಾಲ್ಕು ದಿನ ಲಾಕ್‌ಡೌನ್ ಮಾಡಿ: ಬೈರತಿ

​ಪ್ರಜಾವಾಣಿ ವಾರ್ತೆ
Published 13 ಮೇ 2021, 6:28 IST
Last Updated 13 ಮೇ 2021, 6:28 IST
ಬೈರತಿ ಬಸವರಾಜ
ಬೈರತಿ ಬಸವರಾಜ   

ದಾವಣಗೆರೆ: ಶಿವಮೊಗ್ಗ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು. ಮೂರುದಿನ ಅರೆ ಲಾಕ್‌ಡೌನ್‌ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಸೂಚನೆ ನೀಡಿದರು.

ಒಂದೇ ಕಡೆ ಇಪ್ಪತ್ತಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಕಂಡು ಬಂದರೆ ಮಾತ್ರ ಸೀಲ್ಡೌನ್ ಮಾಡುತ್ತಿದ್ದೀರಿ. ಅದರ ಬದಲು ಹತ್ತು ದಾಟಿದಲ್ಲಿಯೂ ಸೀಲ್ಡೌನ್ ಮಾಡಿ ಎಂದು ಹೇಳಿದರು.

ADVERTISEMENT

ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಎ. ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ, ಎಂ.ಪಿ.ರೇಣುಕಾಚಾರ್ಯ, ಪ್ರೊ. ಲಿಂಗಣ್ಣ, ಮೆಯರ್ ಎಸ್.ಟಿ. ವೀರೇಶ್, ಅಧಿಕಾರಿಗಳು ಇದ್ದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.