ದಾವಣಗೆರೆ: ತಾಲ್ಲೂಕಿನ ಕೈದಾಳ್ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಐಪಿಎಲ್ 20–20 ಕ್ರಿಕೆಟ್ ಪಂದ್ಯ ನಡೆಯುತ್ತಿದ್ದ ವೇಳೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮಂಜುನಾಥ ಎಂಬಾತನನ್ನು ಹದಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಪರಿಶೀಲಿಸಿದಾಗ ಮಂಜುನಾಥ ಬೆಟ್ಟಿಂಗ್ನಲ್ಲಿ ತೊಡಗಿರುವುದು ಕಂಡುಬಂತು. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.