ADVERTISEMENT

ಕಳವು ಪ್ರಕರಣದ ಆರೋಪಿ ಬಂಧನ: ₹4.80 ಲಕ್ಷ ಬೆಲೆಯ ಆಭರಣ ವಶ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2023, 5:49 IST
Last Updated 10 ಅಕ್ಟೋಬರ್ 2023, 5:49 IST
ಹರಿಹರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯಿಂದ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವುದು
ಹರಿಹರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯಿಂದ ಪೊಲೀಸರು ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವುದು   

ಹರಿಹರ: ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸಿರುವ ನಗರ ಠಾಣೆ ಪೊಲೀಸರು, ₹4.80 ಲಕ್ಷ ಮೌಲ್ಯದ 80 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ತುರುವೆಕೆರೆಯ ವಿನೋಬನಗರದ ವೆಂಕಟೇಶ್ ಅಲಿಯಾಸ್ ತಿಪ್ಪೆ ಬಂಧಿತ ಆರೋಪಿ. ಮೇ 15 ರಂದು ನಗರದ ಜೆ.ಸಿ.ಬಡಾವಣೆಯ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು.

ಗ್ರಾಮಾಂತರ ಡಿವೈಎಸ್‌ಪಿ ಬಸವರಾಜ ಬಿ.ಎಸ್. ಮಾರ್ಗದರ್ಶನದಲ್ಲಿ ಸಿಪಿಐ ಬಿ.ದೇವಾನಂದ ನೇತೃತ್ವದಲ್ಲಿ ಪಿಎಸ್‌ಐ ಪ್ರವೀಣ ಕುಮಾರ, ಸಿಬ್ಬಂದಿಯಾದ ಶ್ರೀಪತಿ ಗಿನ್ನಿ, ಮಂಜುನಾಥ ಕಲ್ಲೇದೆವರು, ಮಂಜುನಾಥ ಬಿ.ವಿ., ದೇವರಾಜ್ ಸೂರ್ವೆ, ಮಂಜುನಾಥ ಕ್ಯಾತಮ್ಮನವರ, ಹನುಮಂತ ಗೋಪನಾಳ, ಹೇಮಾನಾಯ್ಕ್, ರುದ್ರಸ್ವಾಮಿ, ಸಿದ್ದರಾಜು, ರಾಘವೇಂದ್ರ, ಶಾಂತರಾಜ್, ನಾಗರಾಜ ಕುಂಬಾರ, ಅಖ್ತರ್, ವಿರೇಶ್, ಅಡಿವೆಪ್ಪನವರ್, ಮಾರುತಿ ಅವರ ತಂಡಕಾರ್ಯಾಚರಣೆ ನಡೆಸಿತ್ತು.

ADVERTISEMENT

ಸೂಚನೆ: ನಾಗರಿಕರು ಮನೆಗಳಿಗೆ ಬೀಗ ಹಾಕಿಕೊಂಡು ಪರಸ್ಥಳಗಳಿಗೆ ಹೋಗುವಾಗ ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲೇ ಬಿಟ್ಟು ಹೋಗಬಾರದು. ಪರಸ್ಥಳಗಳಿಗೆ ಹೋಗುವಾಗ ಮಾಹಿತಿ ನೀಡಿದರೆ ಆ ಪ್ರದೇಶದಲ್ಲಿ ಗಸ್ತು ಹೆಚ್ಚಿಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.