ADVERTISEMENT

ಕೋವಿಡ್‍ ನಿಯಮ ಉಲ್ಲಂಘನೆ: ಶಾಸಕರ ಪುತ್ರನ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 7:19 IST
Last Updated 5 ಜುಲೈ 2021, 7:19 IST

ಹರಿಹರ: ನಗರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಶಾಸಕ ಎಸ್‍. ರಾಮಪ್ಪ ಅವರ ಮಗಳ ಮದುವೆಯಲ್ಲಿ ಕೋವಿಡ್‍ ನಿಯಮ ಉಲ್ಲಂಘಿಸಿರುವ ಆರೋಪದ ಮೇಲೆ ಶಾಸಕರ ಪುತ್ರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.

ಮದುವೆ ಕಾರ್ಯಕ್ರಮದಲ್ಲಿ ಸರ್ಕಾರ ವಿಧಿಸಿರುವ ಕೋವಿಡ್‍ಗಳನ್ನು ಉಲ್ಲಂಘಸಿಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರಸಭೆಯಿಂದ ಶಾಸಕರ ಪುತ್ರ ಯತೀರಾಜ್‍ ಅವರಿಗೆ ₹ 10 ಸಾವಿರ, ಕಲ್ಯಾಣ ಮಂಟಪದ ಮಾಲೀಕ ಅರುಣ್ ಕುಮಾರ್‍ ಅವರಿಗೆ ₹ 5 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೋಟಿಸ್‍ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT