ADVERTISEMENT

ದಾವಣಗೆರೆಯಲ್ಲಿ ಲಾಕ್ ಡೌನ್ ಗೆ ಉತ್ತಮ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2020, 10:24 IST
Last Updated 5 ಜುಲೈ 2020, 10:24 IST
ದಾವಣಗೆರೆಯಲ್ಲಿ ಲಾಕ್‌ಡೌನ್ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು
ದಾವಣಗೆರೆಯಲ್ಲಿ ಲಾಕ್‌ಡೌನ್ ದಿನ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು   

ದಾವಣಗರೆ: ಭಾನುವಾರದ ಲಾಕ್‌‌ಡೌನ್‌‌ಗೆ ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಅನಗತ್ಯವಾಗಿ ಸಂಚರಿಸುವವರಿಗೆ ಪೊಲೀಸರು ಬುದ್ಧಿವಾದ ಹೇಳಿದರು. ಮುಖಗವಸು ಹಾಕದವರಿಗೆ ದಂಡ ವಿಧಿಸಿದರು. ಹಾಲು, ಕಿರಾಣಿ ಅಂಗಡಿ, ಮೆಡಿಕಲ್ ಶಾಪ್, ಹಣ್ಣಿನ ಅಂಗಡಿ, ಆಸ್ಪತ್ರೆ ಹಾಗೂ ಮಾಂಸದಂಗಡಿ ತೆರೆದಿದ್ದವು. ಮದ್ಯದ ಅಂಗಡಿಗಳು ಬಂದ್ ಆಗಿದ್ದವು. ಕೆಎಸ್ಆರ್ ಟಿಸಿ, ಖಾಸಗಿ ಬಸ್ ಗಳು, ಆಟೊ, ಕ್ಯಾಬ್ ಗಳು ಸಂಚರಿಸುತ್ತಿಲ್ಲ. ಹೀಗಾಗಿ ದಾವಣಗೆರೆಯ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT