ADVERTISEMENT

ಮಾಯಕೊಂಡ | ‘ಕೃಷಿಹೊಂಡ ರೈತರಿಗೆ ವರದಾನ’

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 15:41 IST
Last Updated 5 ಫೆಬ್ರುವರಿ 2024, 15:41 IST
ಮಾಯಕೊಂಡ ಸಮೀಪದ ಆನಗೋಡು ಗ್ರಾಮದ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಗುದ್ದಲಿ ಪೂಜೆ ನೆರವೇರಿಸಿದರು
ಮಾಯಕೊಂಡ ಸಮೀಪದ ಆನಗೋಡು ಗ್ರಾಮದ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಗುದ್ದಲಿ ಪೂಜೆ ನೆರವೇರಿಸಿದರು   

ಮಾಯಕೊಂಡ: ಕೃಷಿ ಭಾಗ್ಯ ಯೋಜನೆ ರೈತರಿಗೆ ವರದಾನವಾಗಿದೆ. ಯೋಜನೆಯ ಸದ್ಬಳಕೆಯಿಂದ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ ಎಂದು ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದರು. 

ಸಮೀಪದ ಆನಗೋಡು ಗ್ರಾಮದಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ 2023-24 ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ಆಯ್ಕೆಯಾದ ರೈತ ವಿಶ್ವವಿಜೇತ ಎಂಬುವವರ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. 

ಮಳೆಯಾಧಾರಿತ ಕೃಷಿ ಮಾಡುವ ರೈತರಿಗೆ ನೀರಿನ ಸಮಸ್ಯೆಯನ್ನು ನಿವಾರಿಸಲು ಸರ್ಕಾರ ಕೃಷಿ ಭಾಗ್ಯ ಯೋಜನೆ ಪ್ರಾರಂಭಿಸಿದೆ. ಸಹಾಯಧನದೊಂದಿಗೆ ಜಾರಿಯಾಗಿರುವ ಕೃಷಿಹೊಂಡವನ್ನು ನಿರ್ಮಿಸಿಕೊಂಡು ನೀರಿನ ಸಮಸ್ಯೆಯನ್ನು ದೂರವಾಗಿಸಬೇಕು ಎಂದರು. 

ADVERTISEMENT

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ಶ್ರೀಧರ್‌ಮೂರ್ತಿ ಮಾತನಾಡಿ, ಇಲಾಖೆ ರೈತರ ನೆರವಿಗೆ ಸದಾ ಇರುತ್ತದೆ. ರೈತರು ಅಧಿಕಾರಿಗಳ ಸಲಹೆ ಪಡೆದು ಸೌಲಭ್ಯ ಪಡೆದುಕೊಳ್ಳಬೇಕು ಎಂದರು. 

ಈ ವೇಳೆ ಕೃಷಿ ಅಧಿಕಾರಿ ಶ್ರೀನಿವಾಸ್ ಆರ್., ಎಸ್‌.ಬಿ. ಯೋಗೇಶಪ್ಪ, ಹುಣ್ಸೆಹಳ್ಳಿ ಚಂದ್ರಪ್ಪ, ಆರ್.ವಿ.ತೇಜವರ್ಧನ್, ರೈತ ವಿಶ್ವವಿಜೇತ ಆನಗೋಡು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.