ಉಚ್ಚಂಗಿದುರ್ಗ: ಪ್ರಿಯತಮೆಯೇ ಬೆಂಕಿ ಹಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಸಮೀಪದ ವಡ್ಡಿನಹಳ್ಳಿ ಗ್ರಾಮದ ಪರಸಪ್ಪ (30) ಮೃತಪಟ್ಟ ಯುವಕ. ಪರಸಪ್ಪ ಮತ್ತು ಅದೇ ಗ್ರಾಮದ ಲಕ್ಷ್ಮೀ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈಚೆಗೆ ಆಕೆಗೆ ಬೇರೊಬ್ಬ ಯುವಕನ ಜತೆಗೆ ನಿಶ್ಚಿತಾರ್ಥ ನಡೆದಿತ್ತು. ಇದರಿಂದ ಕೋಪಗೊಂಡಿದ್ದ ಯುವಕ ಭಾನುವಾರ ಅವಳ ಮನೆಗೆ ಹೋಗಿ ಪ್ರಶ್ನಿಸಿದ್ದ. ಮಾತಿನ ಚಕಮಕಿ ನಡೆದಿದ್ದು, ಯುವತಿ ಸೀಮೆ ಎಣ್ಣೆ ಎರಚಿ ಬೆಂಕಿ ಹಚ್ಚಿದ್ದಳು. ಗಂಭೀರ ಗಾಯಗೊಂಡಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಅರಸೀಕೆರೆ ಪೊಲೀಸರು ಬಂಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.