ಜಗಳೂರು: ದೇವಿಕೆರೆ ಗ್ರಾಮದ ಹೋಟೆಲ್ನಲ್ಲಿ ಶುಕ್ರವಾರ ರಾತ್ರಿ ಚಹಾ ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ನಂತರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ದೇವಿಕೆರೆ ಗ್ರಾಮದ ಕಲ್ಲೇಶ್ (37) ಹಾಗೂ ಸಮೀಪದ ಬಸವಾಪುರ ಗ್ರಾಮದ ಶಂಕ್ರಾನಾಯ್ಕ (45) ಮೃತಪಟ್ಟವರು.
ಶಂಕ್ರನಾಯ್ಕ ಅವರಿಗೆ ಸೇರಿದ ಹೋಟೆಲ್ನಲ್ಲಿ ಶುಕ್ರವಾರ ಸಂಜೆ 7 ಗಂಟೆಗೆ ಇಬ್ಬರೂ ಚಹಾ ಸೇವಿಸಿದ್ದಾರೆ. ಕೂಡಲೇ ಅಸ್ವಸ್ಥರಾದ ಅವರನ್ನು ಕೂಡಲೇ ಜಗಳೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ವಿಷ ಪ್ರಾಶನ ಆಗಿವರುವ ಶಂಕೆ ಇದೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.