ADVERTISEMENT

ಕೊಕ್ಕನೂರು: ಸಂಭ್ರಮದ ಕಾರ್ತಿಕ ದೀಪೋತ್ಸವ

ಜಡಿಮಳೆಗೂ ಜಗ್ಗದೆ ಕಡೇ ಕಾರ್ತಿಕಕ್ಕೆ ಹರಿದು ಬಂದ ಭಕ್ತ ಸಮೂಹ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2022, 6:18 IST
Last Updated 12 ಡಿಸೆಂಬರ್ 2022, 6:18 IST
ಮಲೇಬೆನ್ನೂರು ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ಶನಿವಾರ ಜಡಿಮಳೆ ನಡುವೆ ಭಕ್ತರು  ದೀಪ ಹಚ್ಚಿದರು. 
ಮಲೇಬೆನ್ನೂರು ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ಕಾರ್ತಿಕೋತ್ಸವದ ಪ್ರಯುಕ್ತ ಶನಿವಾರ ಜಡಿಮಳೆ ನಡುವೆ ಭಕ್ತರು  ದೀಪ ಹಚ್ಚಿದರು.    

ಮಲೇಬೆನ್ನೂರು: ಸಮೀಪದ ಕೊಕ್ಕನೂರಿನ ಆಂಜನೇಯ ಸ್ವಾಮಿ ‘ಕಾರ್ತಿಕೋತ್ಸವ ಹಾಗೂ ಅಶ್ವೋತ್ಸವ ಶನಿವಾರ ಜಡಿಮಳೆ ನಡುವೆ ವೈಭವದಿಂದ ನಡೆಯಿತು.

ಗ್ರಾಮದ ಮುಖ್ಯಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ಉತ್ಸವ ಮೂರ್ತಿ ಗ್ರಾಮ ದರ್ಶನ ಮೆರವಣಿಗೆ ನಡೆಯಿತು. ದೇವಾಲಯದ ಆವರಣದಲ್ಲಿ ದೀಪ ಬೆಳಗಿಸಿದ ಭಕ್ತರು ಭಕ್ತಿ ಸಮರ್ಪಣೆ ಮಾಡಿದರು.

ದೇವಾಲಯ ಹಾಗೂ ರಾಜಬೀದಿಯನ್ನು ವಿದ್ಯುತ್ ದೀಪಗಳಿಂದ ಹಾಗೂ ಮೂಲ ಆಂಜನೇಯ ವಿಗ್ರಹಕ್ಕೆ ಹೂವುಗಳಿಂದ ಅಲಂಕರಿಸಲಾಗಿತ್ತು. ಚುಮುಚುಮು ಚಳಿ, ಜಡಿ ಮಳೆ ನಡುವೆ ಜಾತ್ರೆಯಲ್ಲಿ ಆಟಿಕೆ ಸಾಮಾನು, ಬೆಂಡು ಬತ್ತಾಸು, ಬಳೆ, ಐಸ್ ಕ್ರೀಂ, ಅಂಗಡಿ ಹಾಕಿದ್ದರು.

ADVERTISEMENT

ಗ್ರಾಮದೆಲ್ಲೆಡೆ ಹಬ್ಬದ ವಾತಾವರಣ ಮೂಡಿತ್ತು. ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು.

ಕಾರು, ಆಟೊ, ಟ್ರ್ಯಾಕ್ಟರ್ ಹಾಗೂ ಇತರೆ ವಾಹನಗಳ ಭರಾಟೆ, ತೆಂಗಿನ ಕಾಯಿ, ಹೂ ಹಣ್ಣಿನ ವ್ಯಾಪಾರ ಹೆಚ್ಚಾಗಿತ್ತು. ದೇವಾಲಯ ಸಮಿತಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಾಡು ಮಾಡಿತ್ತು. ಪೊಲೀಸರು ಭದ್ರತೆ ಒದಗಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.