ಸಂತೇಬೆನ್ನೂರು:ಇಲ್ಲಿಗೆ ಸಮೀಪದ ಸೂಳೆಕೆರೆಗೆ ದಾವಣಗೆರೆ ಜಿಲ್ಲಾಧಿಕಾರಿ ರಮೇಶ್ ಭೇಟಿ ನೀಡಿ ಒತ್ತುವರಿ ಬಗ್ಗೆ ಪ್ರತ್ಯಕ್ಷ ವೀಕ್ಷಣೆ ನಡೆಸಿದರು. ರಾಜ್ಯ ಹೆದ್ದಾರಿಗೆ ಸೂಳೆಕೆರೆ ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾನೂನಿ ಅಡಿಯಲ್ಲಿ ಒತ್ತುವರಿ ತೆರವುಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಮೊದಲು ಸರ್ವೇ ಕಾರ್ಯ ಕೈಗೊಳ್ಳಬೇಕು. ಸರ್ಕಾರಿ ಹುದ್ದೆಯಲ್ಲಿ ಸರ್ವೇಯರ್ ಗಳ ಕೊರತೆ ಇದೆ. ಖಾಸಗಿ ಸರ್ವೇಯರ್ ಗಳ ಮೂಲಕ ನಡೆಸಲು ಚಿಂತನೆ ನಡೆಸಲಾಗುವುದು. ಯಾವುದೇ ರಾಜಕೀಯಕ್ಕೆ ಒಳಗಾಗದೇ ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ, ಖಡ್ಗ ಸಂಘದ ರಾಜ್ಯಾಧ್ಯಕ್ಷ ರಘು ಆರ್. ಹೊನ್ನೆಮರದಹಳ್ಳಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.