ADVERTISEMENT

ಬಡ ಜನರನ್ನು ಒಕ್ಕಲೆಬ್ಬಿಸಬೇಡಿ

ಕರ್ನಾಟಕ ಜನಶಕ್ತಿ ಮತ್ತು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಜಿಲ್ಲಾ‌ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 14:19 IST
Last Updated 18 ಸೆಪ್ಟೆಂಬರ್ 2020, 14:19 IST
ಭೂಮಿ, ವಸತಿ ಸಮಸ್ಯೆಯನ್ನು ಮುಂಬರುವ ಅಧಿವೇಶನದಲ್ಲಿ ಬಗೆಹರಿಸಲು ತೀರ್ಮಾನ  ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಮೆಹಬೂಬ್ ನಗರದಲ್ಲಿ ಜನಜಾಗೃತಿ ಜಾಥಾ ಶುಕ್ರವಾರ ನಡೆಯಿತು
ಭೂಮಿ, ವಸತಿ ಸಮಸ್ಯೆಯನ್ನು ಮುಂಬರುವ ಅಧಿವೇಶನದಲ್ಲಿ ಬಗೆಹರಿಸಲು ತೀರ್ಮಾನ  ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಮೆಹಬೂಬ್ ನಗರದಲ್ಲಿ ಜನಜಾಗೃತಿ ಜಾಥಾ ಶುಕ್ರವಾರ ನಡೆಯಿತು   

ದಾವಣಗೆರೆ: ರಾಜ್ಯದ ಬಡಜನರ ಭೂಮಿ-ವಸತಿ ಸಮಸ್ಯೆಯನ್ನು ಮುಂಬರುವ ಅಧಿವೇಶನದಲ್ಲಿ ಬಗೆಹರಿಸಲು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಜನಜಾಗೃತಿ ಜಾಥಾ ಜಿಲ್ಲೆಗೆ ತಲುಪಿದ್ದು, ಇಲ್ಲಿನ ಮೆಹಬೂಬ್ ನಗರದಲ್ಲಿ ಪ್ರಚಾರಾಂದೋಲನ ಸಭೆ ನಡೆಯಿತು.

ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಭೂಮಿಯಿಂದಾಗಲಿ, ಮನೆಯಿಂದಾಗಲಿ ಒಕ್ಕಲೆಬ್ಬಿಸಬಾರದು ಎಂದುಕರ್ನಾಟಕ ಜನಶಕ್ತಿ ಮತ್ತು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಜಿಲ್ಲಾ‌ ಸಮಿತಿಯಸದಸ್ಯರು ಆಗ್ರಹಿಸಿದರು.

ಫಾರಂ ನಂ. 50, 53,57,94ಸಿ ಮತ್ತು 94ಸಿಸಿ ಹಾಗೂ ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದ ಒಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಈಗಿರುವ ಭೂಮಿಯಲ್ಲಿ ಉಳುಮೆಗೆ ಮತ್ತು ನಿವೇಶನಕ್ಕಾಗಿ ಕೂಡಲೇ ವಿತರಣೆ ಮಾಡಬೇಕು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಕೂಡಲೇ ರದ್ದು ಮಾಡಬೇಕು ಎಂದು ಒತ್ತಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಕುಮಾರ್ ಸಮತಳ, ಕಂದೇಗಾಲ ಶ್ರೀನಿವಾಸ್, ಕರ್ನಾಟಕ ಜನಶಕ್ತಿಯ ಸತೀಶ್ ಅರವಿಂದ್, ಜಬೀನಾ ಖಾನಂ, ಆದೀಲ್ ಖಾನ್, ಖಲೀಲ್, ಅಣ್ಣಪ್ಪ, ಅನ್ವರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.